#😭ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ💔 ವಿಜಯಪುರ: ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ತಿಳಿದು ಬಂದಿದೆ.ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.